1999 ಏಪ್ರಿಲ್ ನಲ್ಲಿ ಪೀಠಾರೋಹಣ ಮಾಡಿದಂದಿನಿಂದ ಜೀವ ಜಗತ್ತಿನ ಶಾಂತಿ ಸಮೃದ್ಧಿಗಾಗಿ ತಮ್ಮನ್ನು ಸಮರ್ಪಿಸಿಕೊಂಡರು. ಆಧ್ಯಾತ್ಮದ ಬಲದಿಂದ ಜನಸಮುದಾಯವನ್ನು ಬೆಳಕಿನೆಡೆಗೆ ಕೊಂಡೊಯ್ಯುತ್ತಿರುವ ಜೀವ ಕಾರುಣ್ಯದ ನೆಲೆಯಾಗಿರುವ ಶ್ರೀ ಶ್ರೀಗಳವರು ಈ ಜಗತ್ತು ಅವಿರತವಾಗಿ ಅನಂತಕಾಲದವರೆಗೂ ಪರಮಾನಂದದಲ್ಲಿ ನಿರತವಾಗಲೆನ್ನುವ ಸಂಕಲ್ಪದಿಂದ ಕಾರ್ಯನಿರತರಾಗಿದ್ದಾರೆ.
ಪರಮಪೂಜ್ಯರ ಧೀಶಕ್ತಿ, ಪ್ರಜ್ಞಾವಂತಿಕೆ, ತಪೊಬಲ, ಜೀವದಯೆ ಅವರನ್ನು ಈ ಜಗತ್ತಿನ ಶ್ರೇಷ್ಟ ಅಧ್ಯಾತ್ಮನಾಯಕರನ್ನಾಗಿಸಿವೆ.
No comments:
Post a Comment